ನೆರೆ ರಾಜ್ಯ ಕೇರಳದಲ್ಲಿ ಕೊವಿಡ್ನ ಉಪತಳಿ ಜೆಎನ್ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿನ್ನೆ ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ ರಾಜ್ಯದಲ್ಲಿ ಒಟ್ಟು 44 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆ ಕಂಡಿದೆ.
ಹೀಗೆ ರಾಜ್ಯದಲ್ಲಿಯೂ ಸಹ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದ್ದು ಈ ಕುರಿತು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ವ್ಯಕ್ತಿ 5 ದಿನಗಳ ಹಿಂದೆ ಮಲ್ಲಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ ದಿನೇಶ್ ಗುಂಡೂರಾವ್ ಮೃತ ವ್ಯಕ್ತಿಯ ಜಿನೊಮಿಕ್ ಸೀಕ್ವೆನ್ಸ್ ರಿಪೋರ್ಟ್ಗಾಗಿ ಕಾಯುತ್ತಿದ್ದೇವೆ ಎಂದರು. ಇನ್ನು ಮೃತ ವ್ಯಕ್ತಿ ಕುಟುಂಬದ ಐವರಿಗೆ ಕೊವಿಡ್ ಟೆಸ್ಟ್ ನಡೆಸಲಾಗಿದ್ದು, ಎಲ್ಲಾ ವ್ಯಕ್ತಿಗಳ ವರದಿ ಸಹ ನೆಗೆಟಿವ್ ಬಂದಿದೆ ಹಾಗೂ ಐವರನ್ನೂ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನೂ ಸಹ ಸಚಿವರು ಹಂಚಿಕೊಂಡಿದ್ದಾರೆ.
ಅಲ್ಲದೇ ಕೇಂದ್ರದಿಂದ ಯಾವುದೇ ಮಾರ್ಗಸೂಚಿ ಬಾರದ ಕಾರಣ ಹೊಸ ವರ್ಷಾಚರಣೆಗೆ ನಿರ್ಬಂಧನೆ ಇಲ್ಲ ಎಂದಿರುವ ದಿನೇಶ್ ಗುಂಡೂರಾವ್ ನಾಳೆ ಸಿಎಂ ಜತೆ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಾಗುವುದು ಎಂದಿದ್ದಾರೆ. ಇನ್ನು ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಹೆಚ್ಚು ಟೆಸ್ಟಿಂಗ್ ಹೇಳಿದ್ದೇವೆ, ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಹೇಳುತ್ತೇವೆ, ಹೆಚ್ಚು ಕೇಸ್ ಆದ್ರೆ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…