ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಆರೋಗ್ಯ ತಪಾಸಣೆ ನಡೆಸುವ 135 ʼಸಂಚಾರಿ ಆರೋಗ್ಯ ಘಟಕʼ ಆಂಬುಲೆನ್ಸ್ ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇದೆ. ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರು ದುಡಿಯಬೇಕು. ಆಗ ಮಾತ್ರ ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯ ಸಾಧ್ಯ ಎಂದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಆಸಕ್ತಿಯಿಂದ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.
ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…