ರಾಜ್ಯ

ನಿಲ್ಲದ ಹೃದಯಾಘಾತ ಪ್ರಕರಣ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ರೈತ ಸಾವು

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಾಮರಾಜನಗರದಿಂದ ಮೈಸೂರಿಗೆ ಬಂದು ಮೈಸೂರಿನಿಂದ ಬೆಂಗಳೂರಿಗೆ ಈಶ್ವರ್ ಅವರು ಇಂದು ಬೆಳಗ್ಗೆ ರೈಲಿನಲ್ಲಿ ಆಗಮಿಸಿದ್ದರು.

ರೈಲು ನಿಲ್ದಾಣದಿಂದ ನಗರದ ಫ್ರೀಡಂ ಪಾರ್ಕ್‍ಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಮೆಜೆಸ್ಟಿಕ್‍ನ ಸಂಗೊಳ್ಳಿರಾಯಣ್ಣ ಸರ್ಕಲ್ ಬಳಿ ಈಶ್ವರ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈಶ್ವರ್ ಅವರಿಗೆ ಮಧುಮೇಹ ಹಾಗೂ ಬಿಪಿ ಇತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

7 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

7 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

7 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

7 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

7 hours ago