ರಾಜ್ಯ

ಹೃದಯಾಘಾತ ಸಡನ್‌ ಡೆತ್‌ ಅಧಿಸೂಚಿತ ಕಾಯಿಲೆ ಎಂದು ಘೋಷಣೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಹಠಾತ್ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ ಸರ್ಕಾರಿ ನೌಕರರು, ಗುತ್ತಿಗೆ ನೌಕರರಿಗೆ ವಾರ್ಷಿಕ ನಿಯಮಿತ ತಪಾಸಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೃದಯಾಘಾತಗಳಿಗೆ ಜನರ ಜೀವನಶೈಲಿ ಕಾರಣವಾಗಿದೆ. ಕೋವಿಡ್ ಲಸಿಕೆಯೇ ಹೃದಯಾಘಾತಕ್ಕೆ ಕಾರಣ ಎಂದು ಎಲ್ಲಿಯೂ ತಿಳಿದುಬಂದಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಅಧ್ಯಯನ ನಡೆದಿದೆ. ಲಸಿಕೆಯಿಂದ ಜನರಿಗೆ ಒಳ್ಳೆಯದಾಗಿದೆ. ಬಹಳಷ್ಟು ಜನರ ಜೀವ ಉಳಿದಿದೆ ಎಂದು ಸ್ಪಷ್ಟಪಡಿಸಿದರು.

ಚಿಕ್ಕವಯಸ್ಸಿನವರಲ್ಲಿ ದಿಢೀರ್ ಹೃದಯಾಘಾತವಾಗುತ್ತಿವೆ. ನಡೆದು ಹೋಗುವಾಗ, ವ್ಯಾಯಾಮ ಮಾಡುವಾಗ ಹಠಾತ್ ಮರಣಗಳಾಗುತ್ತಿವೆ. ಅವುಗಳ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ತಜ್ಞರ ಸಮಿತಿ ಹೇಳಿದೆ. ಸಮಿತಿಯ ಶಿಫಾರಸು ಆಧಾರದ ಮೇಲೆ ಸರ್ಕಾರ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದರು.

ಆಸ್ಪತ್ರೆಯ ಹೊರಗಡೆ ಹಠಾತ್ ಮರಣಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುತ್ತಿದ್ದು, ಆ ಸಾವನ್ನು ಆರೋಗ್ಯ ಇಲಾಖೆಯ ಗಮನಕ್ಕೆ ತಂದು ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆಗೊಳಪಡಿಸುವ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

7 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

7 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

7 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

7 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

7 hours ago