ಬೆಂಗಳೂರು : ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್…
ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ…
ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ…
ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…