ಬೆಂಗಳೂರು : ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…