ರಾಜ್ಯ

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ.

ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಅಲ್ಲದೆ, ಫೆಬ್ರವರಿ 15ರಿಂದ ತಾಪಮಾನವು ಹೆಚ್ಚಾಗುವ ನಿರೀಕ್ಷೆಯಿರುವುದರಿಂದ ಬೇಸಿಗೆಯ ಆರಂಭವೂ ಆಗಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಪ್ರಸ್ತುತ ದಟ್ಟ ಮಂಜಿನ ನಡುವೆ ಬಿಸಿಲಿನ ಝಳವೂ ಹೆಚ್ಚಾಗುತ್ತಿದೆ. ಈಗಲೇ ಬೇಸಿಗೆಯಂತಾಗಿದೆ. ಬೆಳಗ್ಗೆ 10ರಿಂದಲೇ ಮೈಸುಡುವಷ್ಟು ಬಿಸಿಲು ಜನರನ್ನು ಬಾಧಿಸುತ್ತಿದೆ. ಬಿಸಿಲಿನ ಜತೆಗೆ ಧೂಳು ಹೆಚ್ಚಾಗಿದ್ದು, ವಾತಾವರಣ ಶುಷ್ಕತೆಯಿಂದ ಕೂಡಿದೆ. ಕಳೆದ ಒಂದು ವಾರದಿಂದಲೂ ಒಣಹವೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಈ ಬಾರಿ ಡಿಸೆಂಬರ್‌ನಲ್ಲಿ ದಾಖಲೆಯ ಪ್ರಮಾಣದಲ್ಲಿ ಚಳಿಯಿತ್ತು. ಯಾವಾಗ ಚಳಿ ಹೆಚ್ಚಾಗಿರುತ್ತದೆಯೋ ಆ ಬಾರಿ ಬೇಸಿಗೆಯ ಪ್ರಖರತೆ ಕೂಡ ಹೆಚ್ಚಾಗಿರುತ್ತದೆ. ಅಂದರೆ ವಾಡಿಕೆಗಿಂತ ಹೆಚ್ಚು ಉಷ್ಣತೆ ದಾಖಲಾಗುತ್ತದೆ. ಫೆಬ್ರವರಿಯಲ್ಲೂ ಚಳಿಯ ಪ್ರಮಾಣ ಹೆಚ್ಚಾಗಿರುತ್ತಿತ್ತು. ಆದರೆ, ಈ ಬಾರಿ ಜನವರಿ ಅಂತ್ಯದ ವೇಳೆಗೆ ಚಳಿಯ ಪ್ರಭಾವ ಕುಗ್ಗುತ್ತದೆ. ಫೆಬ್ರವರಿಯಿಂದಲೇ ಬಿಸಿಲು ಆರಂಭವಾಗುತ್ತದೆ. ಶುಷ್ಕ ವಾತಾವರಣದಿಂದಾಗಿ ಜನರು ನಾನಾ ರೋಗಗಳಿಗೆ ಒಳಗಾಗುತ್ತಿದ್ದಾರೆ. ಸೂರ್ಯನ ಪ್ರಖರ ಕಿರಣಗಳಿಂದ ಚರ್ಮ ಸುಡುವುದು, ಚರ್ಮದ ಅಲರ್ಜಿಗಳು, ಶ್ವಾಸಕೋಶ ತೊಂದರೆ, ಉಷ್ಣದ ಕೆಮ್ಮು, ತಲೆ ಸುತ್ತು, ಅಂಗೈ-ಅಂಗಾಲು ಉರಿ, ಉರಿ ಮೂತ್ರ, ಮಲಬದ್ಧತೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆಗಳಾಗಿವೆ. ಜತೆಗೆ ಬೇಸಿಗೆಯಲ್ಲಿ ಇವು ಹೆಚ್ಚಾಗಲಿವೆ ಎನ್ನುತ್ತಿದ್ದಾರೆ ವೈದ್ಯರು.

ಧೂಳು ಮತ್ತು ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ. ಜತೆಗೆ, ಖಾಲಿ ಪ್ರದೇಶಗಳು, ಮರ-ಗಿಡಗಳ ಎಲೆಗಳ ಮೇಲೆ ಹೆಚ್ಚು ಧೂಳು ಕೂತಿರುತ್ತದೆ. ಇದರಿಂದ ಒಣ ಕೆಮ್ಮು ಹೆಚ್ಚಾಗುತ್ತಿದೆ. ಮಲಿನ ವಾತಾವರಣದಿಂದಾಗಿ ಬಂದ ಕೆಮ್ಮು ಬೇಗ ವಾಸಿಯಾಗದೆ ಜನರನ್ನು ಹೆಚ್ಚು ಬಾಧಿಸುತ್ತಿದೆ.

ರಾಜ್ಯವು ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ಬಿಸಿ ಮತ್ತು ಆದ್ರ್ರತೆಯ ಪರಿಸ್ಥಿತಿಗಳೊಂದಿಗೆ ಬೇಸಿಗೆಯನ್ನು ಅನುಭವಿಸುತ್ತದೆ, ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಕರಾವಳಿ ಪ್ರದೇಶವು ಹೆಚ್ಚಿನ ಶಾಖ ಅನುಭವಿಸಿದರೆ, ಉತ್ತರ-ಒಳಾಂಗಣ ಪ್ರದೇಶಗಳು ತೀವ್ರ ಶಾಖವನ್ನು ಎದುರಿಸುತ್ತವೆ ಎಂದು ಎಚ್ಚರಿಕೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago