ರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಲಾರ್ವಾ ನಾಶಕ್ಕೆ ಮನೆ ಮನೆ ತಪಾಸಣೆ

ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಆರೋಗ್ಯ ತಪಾಸಣೆ ಜಾಸ್ತಿಯಾಗಿದ್ದು, ಈ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿನ 28 ಲಕ್ಷ ಮನೆಗಳ ಪೈಕಿ 12.5 ಲಕ್ಷ ಮನೆಗಳಲ್ಲಿ ಪ್ರತಿ 14 ದಿನಕ್ಕೊಮ್ಮೆ ಪರಿಶೀಲನೆ ನಡೆಸಲಾಗುವುದು. ಸದ್ಯ ಆಶಾ ಕಾರ್ಯಕರ್ತೆಯರ ತಂಡಗಳನ್ನು ರಚಿಸಲಾಗಿದೆ. ಆದರೆ ಎಲ್ಲಾ ಮನೆಗಳನ್ನು ಅವರಿಂದ ಪರಿಶೀಲಿಸಿ ಲಾರ್ವಾ ಪತ್ತೆ ಮಾಡಿ ನಾಶ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಎನ್‌ಎಸ್‌ಎಸ್‌ ಕಾರ್ಯಕರ್ತರು, ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. 1500 ತಂಡಗಳನ್ನು ರಚಿಸಿ ಪ್ರತಿದಿನ ಲಕ್ಷ ಮನೆಗಳ ಆಸುಪಾಸಿನಲ್ಲಿ ಪರಿಶೀಲಿಸುವಂತೆ ಸೂಚಿಸಲಾಗುವುದು ಎಂದರು.

ಡೆಂಗ್ಯೂ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದ ಉಪಕರಣಗಳ ಕೊರತೆಯಿಲ್ಲ. ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6000 ಪರೀಕ್ಷಾ ಸಾಮಗ್ರಿಗಳಿವೆ. ಜ್ವರದ ಲಕ್ಷಣಗಳಿರುವವರು ಆರೋಗ್ಯ ಕೇಂದ್ರಕ್ಕೆ ಬಂದರೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಜೊತೆಗೆ ಶೀಘ್ರದಲ್ಲೇ 30 ಸಾವಿರ ಪರೀಕ್ಷಾ ಸಾಮಗ್ರಿ ನೀಡುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

1 hour ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

2 hours ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

2 hours ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

3 hours ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

3 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago