ರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಲಾರ್ವಾ ನಾಶಕ್ಕೆ ಮನೆ ಮನೆ ತಪಾಸಣೆ

ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಆರೋಗ್ಯ ತಪಾಸಣೆ ಜಾಸ್ತಿಯಾಗಿದ್ದು, ಈ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿನ 28 ಲಕ್ಷ ಮನೆಗಳ ಪೈಕಿ 12.5 ಲಕ್ಷ ಮನೆಗಳಲ್ಲಿ ಪ್ರತಿ 14 ದಿನಕ್ಕೊಮ್ಮೆ ಪರಿಶೀಲನೆ ನಡೆಸಲಾಗುವುದು. ಸದ್ಯ ಆಶಾ ಕಾರ್ಯಕರ್ತೆಯರ ತಂಡಗಳನ್ನು ರಚಿಸಲಾಗಿದೆ. ಆದರೆ ಎಲ್ಲಾ ಮನೆಗಳನ್ನು ಅವರಿಂದ ಪರಿಶೀಲಿಸಿ ಲಾರ್ವಾ ಪತ್ತೆ ಮಾಡಿ ನಾಶ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಎನ್‌ಎಸ್‌ಎಸ್‌ ಕಾರ್ಯಕರ್ತರು, ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. 1500 ತಂಡಗಳನ್ನು ರಚಿಸಿ ಪ್ರತಿದಿನ ಲಕ್ಷ ಮನೆಗಳ ಆಸುಪಾಸಿನಲ್ಲಿ ಪರಿಶೀಲಿಸುವಂತೆ ಸೂಚಿಸಲಾಗುವುದು ಎಂದರು.

ಡೆಂಗ್ಯೂ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದ ಉಪಕರಣಗಳ ಕೊರತೆಯಿಲ್ಲ. ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6000 ಪರೀಕ್ಷಾ ಸಾಮಗ್ರಿಗಳಿವೆ. ಜ್ವರದ ಲಕ್ಷಣಗಳಿರುವವರು ಆರೋಗ್ಯ ಕೇಂದ್ರಕ್ಕೆ ಬಂದರೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಜೊತೆಗೆ ಶೀಘ್ರದಲ್ಲೇ 30 ಸಾವಿರ ಪರೀಕ್ಷಾ ಸಾಮಗ್ರಿ ನೀಡುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

4 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

4 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

5 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

5 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

10 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

10 hours ago