ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಪ್ರಕರಣಗಳ ಸಂಖ್ಯೆ 10,449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 358 ಸಕ್ರಿಯ ಪ್ರಕರಣಗಳಿದ್ದು, ಡೆಂಗ್ಯೂನಿಂದ 8 ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ಡೆಂಗ್ಯೂ ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಮುಂಗಾರು ಅವಧಿ ಮುಗಿಯುವವರೆಗೂ ಪ್ರತಿಯೊಬ್ಬರು ತುಂಬಾ ಮುಂಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.
ಡೆಂಗ್ಯೂ ತಡೆಗಟ್ಟಲು ಸಾರ್ವಜನಿಕರು ಕೂಡ ಸಹಕಾರ ನೀಡಬೇಕಾಗಿದ್ದು, ಮನೆಯ ಸುತ್ತ ಮುತ್ತ ಸಣ್ಣ ಸಣ್ಣ ಗುಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಶುಚಿತ್ವ ಕಾಪಾಡಬೇಕು. ಗುಂಡಿಗಳಲ್ಲಿ ಹೆಚ್ಚಿನ ದಿನ ನೀರು ನಿಲ್ಲದಂತೆ ಮಾಡಬೇಕು. ಇಲ್ಲದಿದ್ದರೆ ಆ ಗುಂಡಿಗಳಿಂದಲೇ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತದೆ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಡೆಂಗ್ಯೂ ವಿರುದ್ಧ ಹೋರಾಟ ನಡೆಸಬೇಕಿದ್ದು, ಮನೆಯ ಸುತ್ತಮುತ್ತ ಹಾಗೂ ಮನೆಯ ಒಳಗಡೆ ಶುಚಿತ್ವ ಕಾಪಾಡಿಕೊಳ್ಳಬೇಕಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…