ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ.
ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ.
ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಮಳೆಯಿಂದ ಸಣ್ಣ ಸಣ್ಣ ಗುಂಡಿಗಳಲ್ಲಿ ನೀರು ನಿಲ್ಲದಂತೆ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಯಾವುದೇ ವ್ಯಕ್ತಿಗೆ ಸಾಮಾನ್ಯ ರೋಗ ಲಕ್ಷಣಗಳಾದ ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿನೋವು, ವಿಶಿಷ್ಟ ಚರ್ಮದ ಗುಳ್ಳೆಗಳ ಅಥವಾ ದದ್ದುಗಳನ್ನು ಒಳಗೊಂಡಿರುತ್ತದೆ.
ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಗೆ ತೆರಳಿ ಡೆಂಗ್ಯೂ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಜನತೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇನ್ನು ಮಕ್ಕಳಿಗೆ ಡೆಂಗ್ಯೂ ಅಟ್ಯಾಕ್ ಮಾಡುತ್ತಿದ್ದು, ಪೋಷಕರು ಕೂಡ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡಬೇಕಾಗಿ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮಕ್ಕಳನ್ನು ಹೊರಗಡೆ ಆಟವಾಡುವಾಗ ಮುಂಜಾಗ್ರತೆ ವಹಿಸಿ ಕಳುಹಿಸಬೇಕು. ಜೊತೆಗೆ ಗುಂಡಿಗಳ ಕಡೆ ಗಮನಹರಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…