ಬೆಂಗಳೂರು: ರಾಜ್ಯದಲ್ಲಿ ಇಂದು 337 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 19313ಕ್ಕೆ ಏರಿಕೆಯಾಗಿದೆ. 415 ಮಂದಿ ಡೆಂಗ್ಯೂನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 224 ಮಂದಿ ಮನೆಯಲ್ಲಿ 113 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ವರ್ಷದೊಳಗಿನ 10 ಮಕ್ಕಳು, 18 ವರ್ಷದೊಳಗಿನ 133 ಹಾಗೂ 18 ವರ್ಷ ಮೇಲ್ಪಟ್ಟ 194 ಮಂದಿಗೆ ಡೆಂಗ್ಯೂ ದೃಢವಾಗಿದೆ.
ಇದರಲ್ಲಿ ಮೈಸೂರು 23, ಹಾಸನ 18, ಮಂಡ್ಯ 12, ಬಿಬಿಎಂಪಿ 123, ತುಮಕೂರು 24, ಬಾಗಲಕೋಟೆಯಲ್ಲಿ 10 ಪ್ರಕರಣಗಳು ವರದಿಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಡೆಂಗ್ಯೂ ಪರೀಕ್ಷೆ ಕೈಗೊಂಡಿಲ್ಲ.
ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮನೆಯ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ಅಭಿಯಾನ ಶುರು ಮಾಡಲಾಗಿದ್ದು, ಹಳ್ಳಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…