ರಾಜ್ಯ

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ಡೆಂಗ್ಯೂ ಅಲರ್ಟ್‌: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಿಷ್ಟು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ.

ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ. ಅಂಗನವಾಡಿ, ಶಾಲಾ-ಕಾಲೇಜುಗಳ ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಡೆಂಗ್ಯೂಗೆ ಕಾರಣವಾದ ಈಡಿಸ್‌ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.

ಗ್ರಾಮಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳಬೆ ಬಾವಿಗಳಿಂದ ಅಳವಡಿಸಲಿರುವ ಹೆಚ್ಚುವರಿ ನೀರನ್ನು ಶುಚಿಗೊಳಿಸಬೇಕು. ನೀರು ಸೋರಿಕೆ ತಡೆ, ನೀರು ಸರಾಗವಾಗಿ ಹೊರಗೆ ಹೋಗಲು ಹೂಳನ್ನು ಎತ್ತಿ ಸ್ವಚ್ಛವಾಗಿಸಬೇಕು.

ಇನ್ನೂ ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಬುರುಡೆಗಳನ್ನು ನಾಲ್ಕು ಭಾಗ ಮಾಡಿ ಬೋರಲು ಇಟ್ಟು ಪ್ರತಿದಿನ ಕಡ್ಡಾಯವಾಗಿ ವಿಲೇವಾಋಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago