ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ ಒಟ್ಟು 9082 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಪ್ರಮಾಣ ಶೇ.0.07 ರಷ್ಟು ಕಂಡು ಬಂದಿದೆ.
ಡೆಂಗ್ಯೂ ಪ್ರಕರಣಗಳ ಸಂಬಂಧ ರೋಗಿಗಳು ಆಸ್ಪತ್ರೆಗೆ ಸೇರುವ ಸಂಖ್ಯೆಯೂ ಅಧಿಕವಾಗುತ್ತಿದ್ದು, ಒಂದೇ ದಿನದಲ್ಲಿ 2557 ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯಲ್ಲಿ 2830, ಬೆಂಗಳೂರು ನಗರ 57, ಬೆಂಗಳೂರು ಗ್ರಾಮಾಂತರ 38, ರಾಮನಗರ 91, ಕೋಲಾರ 107, ಚಿಕ್ಕಬಳ್ಳಾಪುರ 108, ತುಮಕೂರು 224, ಚಿತ್ರದುರ್ಗ 340, ದಾವಣಗೆರೆ 231, ಶಿವಮೊಗ್ಗ 331, ಮೈಸೂರು 557 ಸೇರಿದಂತೆ ಈವರೆಗೆ ಒಟ್ಟು 9082 ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ 119 ಸಕ್ರಿಯ ಪ್ರಕರಣಗಳು ಕಂಡುಬಂದಿದೆ. 0-1 ವರ್ಷದ 4 ಮಕ್ಕಳು, 1ರಿಂದ 18 ವರ್ಷದ 168 ಮಕ್ಕಳಲ್ಲಿ ಹಾಗೂ 18 ವರ್ಷದ ಮೇಲ್ಪಟ್ಟ 252 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…