ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ ಒಟ್ಟು 9082 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಪ್ರಮಾಣ ಶೇ.0.07 ರಷ್ಟು ಕಂಡು ಬಂದಿದೆ.
ಡೆಂಗ್ಯೂ ಪ್ರಕರಣಗಳ ಸಂಬಂಧ ರೋಗಿಗಳು ಆಸ್ಪತ್ರೆಗೆ ಸೇರುವ ಸಂಖ್ಯೆಯೂ ಅಧಿಕವಾಗುತ್ತಿದ್ದು, ಒಂದೇ ದಿನದಲ್ಲಿ 2557 ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯಲ್ಲಿ 2830, ಬೆಂಗಳೂರು ನಗರ 57, ಬೆಂಗಳೂರು ಗ್ರಾಮಾಂತರ 38, ರಾಮನಗರ 91, ಕೋಲಾರ 107, ಚಿಕ್ಕಬಳ್ಳಾಪುರ 108, ತುಮಕೂರು 224, ಚಿತ್ರದುರ್ಗ 340, ದಾವಣಗೆರೆ 231, ಶಿವಮೊಗ್ಗ 331, ಮೈಸೂರು 557 ಸೇರಿದಂತೆ ಈವರೆಗೆ ಒಟ್ಟು 9082 ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ 119 ಸಕ್ರಿಯ ಪ್ರಕರಣಗಳು ಕಂಡುಬಂದಿದೆ. 0-1 ವರ್ಷದ 4 ಮಕ್ಕಳು, 1ರಿಂದ 18 ವರ್ಷದ 168 ಮಕ್ಕಳಲ್ಲಿ ಹಾಗೂ 18 ವರ್ಷದ ಮೇಲ್ಪಟ್ಟ 252 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…