ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ ಒಟ್ಟು 9082 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಪ್ರಮಾಣ ಶೇ.0.07 ರಷ್ಟು ಕಂಡು ಬಂದಿದೆ.
ಡೆಂಗ್ಯೂ ಪ್ರಕರಣಗಳ ಸಂಬಂಧ ರೋಗಿಗಳು ಆಸ್ಪತ್ರೆಗೆ ಸೇರುವ ಸಂಖ್ಯೆಯೂ ಅಧಿಕವಾಗುತ್ತಿದ್ದು, ಒಂದೇ ದಿನದಲ್ಲಿ 2557 ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಇನ್ನೂ ಬಿಬಿಎಂಪಿ ವ್ಯಾಪ್ತಿಯಲ್ಲಿ 2830, ಬೆಂಗಳೂರು ನಗರ 57, ಬೆಂಗಳೂರು ಗ್ರಾಮಾಂತರ 38, ರಾಮನಗರ 91, ಕೋಲಾರ 107, ಚಿಕ್ಕಬಳ್ಳಾಪುರ 108, ತುಮಕೂರು 224, ಚಿತ್ರದುರ್ಗ 340, ದಾವಣಗೆರೆ 231, ಶಿವಮೊಗ್ಗ 331, ಮೈಸೂರು 557 ಸೇರಿದಂತೆ ಈವರೆಗೆ ಒಟ್ಟು 9082 ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ 119 ಸಕ್ರಿಯ ಪ್ರಕರಣಗಳು ಕಂಡುಬಂದಿದೆ. 0-1 ವರ್ಷದ 4 ಮಕ್ಕಳು, 1ರಿಂದ 18 ವರ್ಷದ 168 ಮಕ್ಕಳಲ್ಲಿ ಹಾಗೂ 18 ವರ್ಷದ ಮೇಲ್ಪಟ್ಟ 252 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…