ರಾಜ್ಯ

ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ. ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ ಹಾಗೂ ಹುಬ್ಬಳ್ಳಿಗೆ ಹೋಗುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೇ ರೋಗಿಗಳು ಸಾವನ್ನಪ್ಪುತ್ತಿದ್ದು, ಸರ್ಕಾರ ಅದನ್ನು ಮುಚ್ಚಿಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಡೆಂಗ್ಯೂ ಹೆಚ್ಚಳದ ಬಗ್ಗೆ ನಾನು ಮೊದಲೇ ಹೇಳಿದ್ದೆ. ಆದರೆ ಸರ್ಕಾರ ಯಾವುದೇ ವ್ಯವಸ್ಥೆ ಮಾಡಿಲ್ಲ. ರೋಗಿಗಳು ಪರದಾಡುತ್ತಿದ್ದಾರೆ. ಸಾವು-ನೋವು ಹೆಚ್ಚಾಗುತ್ತಿವೆ. ಈಗಾಗಲೇ ಹಲವಾರು ಸಾವಾಗಿದೆ. ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಡೆಂಗ್ಯೂ ಸಾವು ಹಾವೇರಿಯಲ್ಲೇ ಆಗಿದೆ. ಕೂಡಲೇ ಡಿಹೆಚ್‌ಓ ವರ್ಗಾವಣೆ ಮಾಡಬೇಕು. ಆಶಾ ಕಾರ್ಯಕರ್ತೆಯರ ಸಹಾಯ ತೆಗೆದುಕೊಂಡು ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಡೆಂಗ್ಯೂ ಕೇಸ್‌ ಹೆಚ್ಚಾಗದಂತೆ ತಡೆಯಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಆದ್ದರಿಂದ ದಿನದಿಂದ ದಿನಕ್ಕೆ ಕೇಸ್‌ಗಳು ಹೆಚ್ಚಾಗುತ್ತಿವೆ. ಇನ್ನಾದರೂ ಡೆಂಗ್ಯೂ ವೇಗವಾಗಿ ಹರಡುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಿರ್ಲೆ-ಭೇರ್ಯ-ಕೊಡಿಯಾಲ ರಸ್ತೆ ಅಭಿವೃದ್ಧಿ ಯಾವಾಗ?

ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…

1 min ago

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

24 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

24 hours ago