ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ರೋಗಿಗಳ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ. ಹಾವೇರಿಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಜನರು ದಾವಣಗೆರೆ ಹಾಗೂ ಹುಬ್ಬಳ್ಳಿಗೆ ಹೋಗುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೇ ರೋಗಿಗಳು ಸಾವನ್ನಪ್ಪುತ್ತಿದ್ದು, ಸರ್ಕಾರ ಅದನ್ನು ಮುಚ್ಚಿಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಡೆಂಗ್ಯೂ ಹೆಚ್ಚಳದ ಬಗ್ಗೆ ನಾನು ಮೊದಲೇ ಹೇಳಿದ್ದೆ. ಆದರೆ ಸರ್ಕಾರ ಯಾವುದೇ ವ್ಯವಸ್ಥೆ ಮಾಡಿಲ್ಲ. ರೋಗಿಗಳು ಪರದಾಡುತ್ತಿದ್ದಾರೆ. ಸಾವು-ನೋವು ಹೆಚ್ಚಾಗುತ್ತಿವೆ. ಈಗಾಗಲೇ ಹಲವಾರು ಸಾವಾಗಿದೆ. ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಡೆಂಗ್ಯೂ ಸಾವು ಹಾವೇರಿಯಲ್ಲೇ ಆಗಿದೆ. ಕೂಡಲೇ ಡಿಹೆಚ್ಓ ವರ್ಗಾವಣೆ ಮಾಡಬೇಕು. ಆಶಾ ಕಾರ್ಯಕರ್ತೆಯರ ಸಹಾಯ ತೆಗೆದುಕೊಂಡು ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಡೆಂಗ್ಯೂ ಕೇಸ್ ಹೆಚ್ಚಾಗದಂತೆ ತಡೆಯಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಆದ್ದರಿಂದ ದಿನದಿಂದ ದಿನಕ್ಕೆ ಕೇಸ್ಗಳು ಹೆಚ್ಚಾಗುತ್ತಿವೆ. ಇನ್ನಾದರೂ ಡೆಂಗ್ಯೂ ವೇಗವಾಗಿ ಹರಡುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…