ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ ಸ್ಥಳಗಳಲ್ಲಿ ನಿಯಂತ್ರಣ ಮಾಡುವುದು ಮೊದಲ ಕೆಲಸವಾಗಬೇಕು. ಸಂಗ್ರಹವಾದ ನೀರಿನಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತದೆ. ಅದನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿಡಬೇಕು.
ಈ ವಿಚಾರಗಳನ್ನು ಸಾರ್ವಜನಿಕರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಮನೆಗಳ ಮುಂದೆ ನೀರು ನಿಲ್ಲುತ್ತದೆ. ಡೆಂಗ್ಯೂ, ವೈರಲ್ ಜ್ವರ, ಸಾವು ಸಂಭವಿಸದಂತೆ ತಡೆಯಬೇಕು ಎಂದು ಸೂಚನೆ ನೀಡಿದರು.
ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಹೀಗಾಗಿ ಯಾರೂ ಕೂಡ ಮನೆಯ ಅಕ್ಕಪಕ್ಕ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಡೆಂಗ್ಯೂನ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಕೂಡ ನಿರ್ಲಕ್ಷ್ಯ ವಹಿಸಬೇಡಿ ಎಂದು ಮನವಿ ಮಾಡಿದರು.,
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…