ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ ಸ್ಥಳಗಳಲ್ಲಿ ನಿಯಂತ್ರಣ ಮಾಡುವುದು ಮೊದಲ ಕೆಲಸವಾಗಬೇಕು. ಸಂಗ್ರಹವಾದ ನೀರಿನಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತದೆ. ಅದನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿಡಬೇಕು.
ಈ ವಿಚಾರಗಳನ್ನು ಸಾರ್ವಜನಿಕರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಮನೆಗಳ ಮುಂದೆ ನೀರು ನಿಲ್ಲುತ್ತದೆ. ಡೆಂಗ್ಯೂ, ವೈರಲ್ ಜ್ವರ, ಸಾವು ಸಂಭವಿಸದಂತೆ ತಡೆಯಬೇಕು ಎಂದು ಸೂಚನೆ ನೀಡಿದರು.
ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಹೀಗಾಗಿ ಯಾರೂ ಕೂಡ ಮನೆಯ ಅಕ್ಕಪಕ್ಕ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಡೆಂಗ್ಯೂನ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಕೂಡ ನಿರ್ಲಕ್ಷ್ಯ ವಹಿಸಬೇಡಿ ಎಂದು ಮನವಿ ಮಾಡಿದರು.,
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…