Rain Intensifies; Red Alert Issued
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. ನಾಳೆಯೂ ಕೂಡ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಕೊಡಗಿನಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹಾಸನದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿವೆ.
ಸಕ್ಕರೆ ನಾಡು ಮಂಡ್ಯದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಮೈಸೂರು ಭಾಗದಲ್ಲಿ ಮಳೆಯಾಗುತ್ತಿದ್ದು, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆಯಲ್ಲೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನಾಳೆಯೂ ಮಳೆಯ ಪರಿಸ್ಥಿತಿ ನೋಡಿಕೊಂಡು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…