ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…