ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…