ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…