ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…