ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…