ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…