ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.
ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.
ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಗಳನ್ನು ನಿಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಭಕ್ತರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ ಸ್ನಾನಘಟ್ಟದ ಬಳಿ ಯಾರೂ ಕೂಡ ಹೋಗಬಾರದು. ನೀರು ಕಡಿಮೆಯಾದರಷ್ಟೇ ಅಲ್ಲಿಗೆ ಹೋಗಲು ಅನುಮತಿ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…