ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ರಕ್ಕಸ ಮಳೆಗೆ ರಾಜ್ಯದ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆಯಿಂದ ಭಾರೀ ಅವಾಂತರ ಸೃಷ್ಟಿಸಿ ಜನರ ಜೀವನ ಮುರಾಬಟ್ಟೆಯಾಗಿಸಿಬಿಟ್ಟಿದೆ.
ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಚಿತ್ರದುರ್ಗ, ಕೋಲಾರ, ಮೈಸೂರು ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಬೆಂಗಳೂರು ನಗರ, ಕರಾವಳಿ ಹಾಗೂ ಮಳೆನಾಡು ಭಾಗದ ಜಿಲ್ಲೆಗಳು ಸೇರಿದಂತೆ 17 ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆ ಬಿದ್ದಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಹಾಗೂ ರಾಜ್ಯದ ಒಳನಾಡಿನಲ್ಲಿ ಟ್ರಫ್ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಬಯಲುಸೀಮೆ ಪ್ರದೇಶಗಳಾದ ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಒಂದೆಡೆ ಕೃಷಿ ಚಟುವಟಿಕೆಗಳು ಗರಿಗೆದರಿ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದರೆ ಮತ್ತೊಂದೆಡೆ ಭಾರೀ ಮಳೆಯಿಂದ ಬೆಳೆ ಕಳೆದುಕೊಂಡು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಮಳೆಯಾಗಲಿದೆ. ಬಹುತೇಕ ಕಡೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…