ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ದೇಶಕ್ಕೆ ಈಗಾಗಲೇ ನೈರುತ್ಯ ಮುಂಗಾರು ಪ್ರವೇಶ ಮಾಡಿದೆ. ಹವಾಮಾನ ಇಲಾಖೆ ಕೂಡ ಮಳೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಬಾರಿಗಿಂತ ಈ ಬಾರಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಎಲ್ಲರೂ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು.
ಇನ್ನೂ ಹೆಚ್ಚು ಮಳೆ ಸುರಿಯುವ ಪರಿಣಾಮ ಜಲಾಶಯಗಳು ಕೂಡ ಭರ್ತಿಯಾಗಲಿವೆ. ಭರ್ತಿಯಾದ ಮೇಲೆ ಯಾವುದೇ ಕ್ಷಣಗಳಿಂದ ನದಿಗಳಿಗೆ ನೀರನ್ನು ಬಿಡಲಾಗುತ್ತದೆ. ಆದ್ದರಿಂದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾರೂ ಕೂಡ ತುಂಬಿ ಹರಿಯುತ್ತಿರುವ ನದಿ ಬಳಿ ತೆರಳಬಾರದು ಎಂದು ಮನವಿ ಮಾಡಿದರು.
ಒಂದು ವೇಳೆ ಪ್ರವಾಹ ಎದುರಾದರೆ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧತೆ ಕೈಗೊಂಡಿದೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…