ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ದೇಶಕ್ಕೆ ಈಗಾಗಲೇ ನೈರುತ್ಯ ಮುಂಗಾರು ಪ್ರವೇಶ ಮಾಡಿದೆ. ಹವಾಮಾನ ಇಲಾಖೆ ಕೂಡ ಮಳೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಬಾರಿಗಿಂತ ಈ ಬಾರಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಎಲ್ಲರೂ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದರು.
ಇನ್ನೂ ಹೆಚ್ಚು ಮಳೆ ಸುರಿಯುವ ಪರಿಣಾಮ ಜಲಾಶಯಗಳು ಕೂಡ ಭರ್ತಿಯಾಗಲಿವೆ. ಭರ್ತಿಯಾದ ಮೇಲೆ ಯಾವುದೇ ಕ್ಷಣಗಳಿಂದ ನದಿಗಳಿಗೆ ನೀರನ್ನು ಬಿಡಲಾಗುತ್ತದೆ. ಆದ್ದರಿಂದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾರೂ ಕೂಡ ತುಂಬಿ ಹರಿಯುತ್ತಿರುವ ನದಿ ಬಳಿ ತೆರಳಬಾರದು ಎಂದು ಮನವಿ ಮಾಡಿದರು.
ಒಂದು ವೇಳೆ ಪ್ರವಾಹ ಎದುರಾದರೆ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧತೆ ಕೈಗೊಂಡಿದೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…