ರಾಜ್ಯ

ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾದ ಹಿನ್ನೆಲೆ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು: ಈ ವರ್ಷ ವಿಪರೀತ ಮಳೆ ಸುರಿಯುತ್ತಿರುವ ಪರಿಣಾಮ ತರಕಾರಿ ಹಾಗೂ ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ತರಕಾರಿಗಳನ್ನು ಕೊಳ್ಳಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಬೆಲೆ ಕೇಳಿಯೇ ಗ್ರಾಹಕರು ಸುಸ್ತಾಗುತ್ತಿದ್ದಾರೆ. ಬೆಲೆ ಜಾಸ್ತಿಯಾದರೂ ಕೊಂಡುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಮೂರು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದೆ.  ಈ ಹಿನ್ನೆಲೆಯಲ್ಲಿ ಬೆಳೆಗಳಿಗೆ ಕೂಡ ಭಾರೀ ಹಾನಿಯಾಗುತ್ತಿದ್ದು, ಮಾರುಕಟ್ಟೆಗೆ ಹೂವು ಹಾಗೂ ತರಕಾರಿಗಳು ಸರಿಯಾಗಿ ಬರುತ್ತಿಲ್ಲ. ಪರಿಣಾಮ ತರಕಾರಿ ಹಾಗೂ ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.

ಹೂವುಗಳಲ್ಲಿ ಸೇವಂತಿಗೆ, ಕಾಕಡ, ಮಲ್ಲಿಗೆ, ಕನಕಾಂಬರ, ಗುಲಾಬಿ ಸೇರಿದಂತೆ ಎಲ್ಲಾ ಹೂವುಗಳ ಬೆಲೆ ದುಪ್ಪಟ್ಟಾಗಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ. ಆಷಾಢ ಮಾಸದಲ್ಲಿ ಕೊಳ್ಳಲೇ ಬೇಕಾದ ಅನಿವಾರ್ಯ ಇರುವುದರಿಂದ ಬೆಲೆ ಜಾಸ್ತಿಯಾದರೂ ಹೂವುಗಳನ್ನು ಕೊಂಡುಕೊಂಡು ಹೋಗುತ್ತಿದ್ದಾರೆ.

ಹೂವಿನ ಜೊತೆ ತರಕಾರಿಗಳ ಬೆಲೆಯೂ ಏರಿಕೆಯಾಗಿದ್ದು, ಟೊಮೋಟೋ, ಕ್ಯಾರೆಟ್‌, ಬಟಾಣಿ, ಈರುಳ್ಳಿ ಬೆಲೆ ದುಪ್ಪಟ್ಟಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ತರಕಾರಿಗಳ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ.

ತರಕಾರಿಗಳು ಹಾಗೂ ಹೂವುಗಳ ಬೆಲೆ ಹೆಚ್ಚಾಗಲು ಮಳೆಯೇ ಕಾರಣ ಎನ್ನಲಾಗುತ್ತಿದ್ದು, ಮಾರುಕಟ್ಟೆಗೆ ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಕೂಡ ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago