ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ.
ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಸೇತುವೆ ತುಂಡಾಗುವ ವೇಳೆಯೇ ಗೋವಾದಿಂದ ಬರುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ.
ತಕ್ಷಣ ಎಚ್ಚೆತ್ತ ಮೀನುಗಾರರು ಹಾಗೂ ಪೊಲೀಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷಣ ನಾಳಾ ಸ್ವಾಮಿ ಎಂಬುವವರನ್ನು ರಕ್ಷಣೆ ಮಾಡಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಘಟನೆ ಸಂಭವಿಸುವ ಮುನ್ನವೇ ಬೈಕ್ ಹಾಗೂ ಕಾರು ಕೂಡ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಆದರೆ ಅವೆರಡು ವಾಹನಗಳು ಮುಂದೆ ಸಾಗಿದವು ಎನ್ನಲಾಗಿದೆ. ಸದ್ಯ ಟ್ರಕ್ ನೀರಿನಲ್ಲಿ ಬಿದ್ದಿದ್ದು, ಮತ್ತೆ ಯಾವುದಾದರೂ ವಾಹನ ಬಿದ್ದಿರಬಹುದು ಎಂದು ಮೀನುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.
ಈ ಸೇತುವೆ ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಹೆಚ್ಚಿನ ಮಳೆಯಿಂದಾಗಿ ಇದು ಕುಸಿದು ಬಿದ್ದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಂಜಾಗ್ರತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸ ಸೇತುವೆಯ ಮೇಲಿಂದಲೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಹಳೆಯ ಸೇತುವೆ ಕುಸಿದಿರುವ ಪರಿಣಾಮ ಹೊಸ ಸೇತುವೆ ಪರಿಶೀಲನೆಗೆ ಆದೇಶ ಹೊರಡಿಸಲಾಗಿದ್ದು, ಸೇತುವೆ ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ತಕ್ಷಣವೇ ಅವಕಾಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…