ರಾಜ್ಯ

ಕಾರವಾರದಲ್ಲಿ ಕಾಳಿ ನದಿಗೆ ಕಟ್ಟಲಾಗಿದ್ದ ಸೇತುವೆ ಕುಸಿತ: ಲಾರಿ ಪಲ್ಟಿ

ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ.

ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್‌ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್‌ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಸೇತುವೆ ತುಂಡಾಗುವ ವೇಳೆಯೇ ಗೋವಾದಿಂದ ಬರುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ.

ತಕ್ಷಣ ಎಚ್ಚೆತ್ತ ಮೀನುಗಾರರು ಹಾಗೂ ಪೊಲೀಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷಣ ನಾಳಾ ಸ್ವಾಮಿ ಎಂಬುವವರನ್ನು ರಕ್ಷಣೆ ಮಾಡಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಘಟನೆ ಸಂಭವಿಸುವ ಮುನ್ನವೇ ಬೈಕ್‌ ಹಾಗೂ ಕಾರು ಕೂಡ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಆದರೆ ಅವೆರಡು ವಾಹನಗಳು ಮುಂದೆ ಸಾಗಿದವು ಎನ್ನಲಾಗಿದೆ. ಸದ್ಯ ಟ್ರಕ್‌ ನೀರಿನಲ್ಲಿ ಬಿದ್ದಿದ್ದು, ಮತ್ತೆ ಯಾವುದಾದರೂ ವಾಹನ ಬಿದ್ದಿರಬಹುದು ಎಂದು ಮೀನುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಈ ಸೇತುವೆ ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಹೆಚ್ಚಿನ ಮಳೆಯಿಂದಾಗಿ ಇದು ಕುಸಿದು ಬಿದ್ದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಂಜಾಗ್ರತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸ ಸೇತುವೆಯ ಮೇಲಿಂದಲೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಹಳೆಯ ಸೇತುವೆ ಕುಸಿದಿರುವ ಪರಿಣಾಮ ಹೊಸ ಸೇತುವೆ ಪರಿಶೀಲನೆಗೆ ಆದೇಶ ಹೊರಡಿಸಲಾಗಿದ್ದು, ಸೇತುವೆ ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ತಕ್ಷಣವೇ ಅವಕಾಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

9 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

9 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

10 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

10 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

10 hours ago