ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ.
ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಸೇತುವೆ ತುಂಡಾಗುವ ವೇಳೆಯೇ ಗೋವಾದಿಂದ ಬರುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ.
ತಕ್ಷಣ ಎಚ್ಚೆತ್ತ ಮೀನುಗಾರರು ಹಾಗೂ ಪೊಲೀಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷಣ ನಾಳಾ ಸ್ವಾಮಿ ಎಂಬುವವರನ್ನು ರಕ್ಷಣೆ ಮಾಡಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಘಟನೆ ಸಂಭವಿಸುವ ಮುನ್ನವೇ ಬೈಕ್ ಹಾಗೂ ಕಾರು ಕೂಡ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಆದರೆ ಅವೆರಡು ವಾಹನಗಳು ಮುಂದೆ ಸಾಗಿದವು ಎನ್ನಲಾಗಿದೆ. ಸದ್ಯ ಟ್ರಕ್ ನೀರಿನಲ್ಲಿ ಬಿದ್ದಿದ್ದು, ಮತ್ತೆ ಯಾವುದಾದರೂ ವಾಹನ ಬಿದ್ದಿರಬಹುದು ಎಂದು ಮೀನುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.
ಈ ಸೇತುವೆ ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಹೆಚ್ಚಿನ ಮಳೆಯಿಂದಾಗಿ ಇದು ಕುಸಿದು ಬಿದ್ದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಂಜಾಗ್ರತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸ ಸೇತುವೆಯ ಮೇಲಿಂದಲೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಹಳೆಯ ಸೇತುವೆ ಕುಸಿದಿರುವ ಪರಿಣಾಮ ಹೊಸ ಸೇತುವೆ ಪರಿಶೀಲನೆಗೆ ಆದೇಶ ಹೊರಡಿಸಲಾಗಿದ್ದು, ಸೇತುವೆ ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ತಕ್ಷಣವೇ ಅವಕಾಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…