ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಅರಣ್ಯ ಮಾರ್ಗವನ್ನು ಮುಚ್ಚಲಾಗಿದೆ.
ಕಾಲ್ನಡಿಗೆ ಯಾತ್ರಿಕರು ನೀಲಕ್ಕಡ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದೆ. ನಿನ್ನೆಯಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಮಳೆ ಕೂಡ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಭೂಕುಸಿತವಾಗುವ ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೇರಳ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಯಾತ್ರಿಕರು ಇದಕ್ಕೆ ಸಹಕಾರ ನೀಡುವಂತೆ ಕೋರಿದೆ.
ಇನ್ನು ಕೇರಳ ರಾಜ್ಯದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…