ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಅರಣ್ಯ ಮಾರ್ಗವನ್ನು ಮುಚ್ಚಲಾಗಿದೆ.
ಕಾಲ್ನಡಿಗೆ ಯಾತ್ರಿಕರು ನೀಲಕ್ಕಡ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದೆ. ನಿನ್ನೆಯಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಮಳೆ ಕೂಡ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಭೂಕುಸಿತವಾಗುವ ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೇರಳ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಯಾತ್ರಿಕರು ಇದಕ್ಕೆ ಸಹಕಾರ ನೀಡುವಂತೆ ಕೋರಿದೆ.
ಇನ್ನು ಕೇರಳ ರಾಜ್ಯದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…