ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಅರಣ್ಯ ಮಾರ್ಗವನ್ನು ಮುಚ್ಚಲಾಗಿದೆ.
ಕಾಲ್ನಡಿಗೆ ಯಾತ್ರಿಕರು ನೀಲಕ್ಕಡ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದೆ. ನಿನ್ನೆಯಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಮಳೆ ಕೂಡ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಭೂಕುಸಿತವಾಗುವ ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೇರಳ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಯಾತ್ರಿಕರು ಇದಕ್ಕೆ ಸಹಕಾರ ನೀಡುವಂತೆ ಕೋರಿದೆ.
ಇನ್ನು ಕೇರಳ ರಾಜ್ಯದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…