Mysore
21
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

Tags:
error: Content is protected !!