ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ.
ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು ಸಹ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಸಂತಸಗೊಂಡಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಮುನ್ಸೂಚನೆ ಕಾಣುತ್ತಿದೆ.
ಚೈನ್ ಲಿಂಕ್ ಕಟ್ ಆಗಿ ಜಾರಿ ಹೋಗಿದ್ದ 19ನೇ ಕ್ರಸ್ಟ್ ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಿ ಗೇಟ್ ಮೂಲಕ ನೀರಿನ ಹೊರಹರಿವನ್ನು ಬಂದ್ ಮಾಡಲಾಗಿದೆ. ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಇದೆ. ಸದ್ಯ ಡ್ಯಾಂನಲ್ಲಿ 71.14 ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಸಮಯದಲ್ಲಿ 87.56 ಅಡಿ ನೀರಿನ ಸಂಗ್ರಹವಿತ್ತು.
ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಪರಿಣಾಮ ಪ್ರತಿ ದಿನ ಮೂರರಿಂದ ನಾಲ್ಕು ಟಿಎಂಸಿ ನೀರು ನದಿಯಲ್ಲಿ ಒಳಹರಿವು ಇದೆ. ಮಾಹಿತಿಗಳ ಪ್ರಕಾರ ಮುಂದಿನ ವಾರದಲ್ಲಿ ಮಲೆನಾಡು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದ್ದು, ನಿಸರ್ಗದ ಕೃಪೆಯಿಂದ ಮುಂದಿನ 10 ದಿನಗಳ ಒಳಗೆ ಡ್ಯಾಂ ತುಂಬುವ ಸಾಧ್ಯತೆಯಿದೆ. ಹಾಗಾಗಿ ಯಾರೂ ಕೂಡ ಆತಂಕ ಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಈ ಮೂಲಕ ಆ ಭಾಗದ ಅನ್ನದಾತರಿಗೆ ಕೊಂಚ ನೆಮ್ಮದಿ ಸಿಕ್ಕದಂತಾಗಿದ್ದು, ಈ ಬಾರಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…