ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ.
ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು ಸಹ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಸಂತಸಗೊಂಡಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಮುನ್ಸೂಚನೆ ಕಾಣುತ್ತಿದೆ.
ಚೈನ್ ಲಿಂಕ್ ಕಟ್ ಆಗಿ ಜಾರಿ ಹೋಗಿದ್ದ 19ನೇ ಕ್ರಸ್ಟ್ ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಿ ಗೇಟ್ ಮೂಲಕ ನೀರಿನ ಹೊರಹರಿವನ್ನು ಬಂದ್ ಮಾಡಲಾಗಿದೆ. ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಇದೆ. ಸದ್ಯ ಡ್ಯಾಂನಲ್ಲಿ 71.14 ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಸಮಯದಲ್ಲಿ 87.56 ಅಡಿ ನೀರಿನ ಸಂಗ್ರಹವಿತ್ತು.
ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಪರಿಣಾಮ ಪ್ರತಿ ದಿನ ಮೂರರಿಂದ ನಾಲ್ಕು ಟಿಎಂಸಿ ನೀರು ನದಿಯಲ್ಲಿ ಒಳಹರಿವು ಇದೆ. ಮಾಹಿತಿಗಳ ಪ್ರಕಾರ ಮುಂದಿನ ವಾರದಲ್ಲಿ ಮಲೆನಾಡು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದ್ದು, ನಿಸರ್ಗದ ಕೃಪೆಯಿಂದ ಮುಂದಿನ 10 ದಿನಗಳ ಒಳಗೆ ಡ್ಯಾಂ ತುಂಬುವ ಸಾಧ್ಯತೆಯಿದೆ. ಹಾಗಾಗಿ ಯಾರೂ ಕೂಡ ಆತಂಕ ಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಈ ಮೂಲಕ ಆ ಭಾಗದ ಅನ್ನದಾತರಿಗೆ ಕೊಂಚ ನೆಮ್ಮದಿ ಸಿಕ್ಕದಂತಾಗಿದ್ದು, ಈ ಬಾರಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…