ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯದ ಪ್ರತಿ ಪಂಚಾಯತ್ ಮಟ್ಟದಲ್ಲೂ ಟಾಸ್ಕ್ಫೋರ್ಸ್ ರಚಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.
ಇಂದು(ಜು.2) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆ ಆದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು ಎಂದರು.
ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತದೆ. ಈಗಾಗಲೇ ಮಳೆಯಿಂದ 20 ಸಾವು ಸಂಬoಧಿಸಿದೆ. ಜಿಲ್ಲಾಧಿಕಾರಿಗಳು ಪ್ರತಿಯೊಂದು ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ. ಪಂಚಾಯತ್ ಮಟ್ಟದಲ್ಲಿ ರಚನೆಯಾಗುವ ಟಾಸ್ಕ್ಫೋರ್ಸ್ನಲ್ಲಿ, ಪಂಚಾಯತ್ ಇಲಾಖೆ ನೌಕರರು, ಕಂದಾಯ ಇಲಾಖೆ ನೌಕರರು, ಅಗ್ನಿಶಾಮಕ ವಿಭಾಗ, ಪೊಲೀಸ್ ಇಲಾಖೆ ಹಾಗೂ ಸಣ್ಣ ನೀರಾವರಿ ಅಧಿಕಾರಿಗಳು ಇರಲಿದ್ದಾರೆ ಎಂದು ತಿಳಿಸಿದರು.
ಕಾಳಜಿ ಕೇಂದ್ರಗಳ ರಚನೆಗೆ ಸೂಚನೆ
ಮಳೆಯಿಂದ ಕುಸಿಯಬಹುದಾದ ಮನೆಗಳನ್ನು ಗುರುತಿಸಿ ಅಂತಹ ಮನೆಗಳಲ್ಲಿ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರ್ ಅವರ ಪಿ.ಡಿ ಖಾತೆಯಲ್ಲಿ 776 ಕೋಟಿ ರೂ ಟಾಸ್ಕ್ ಫೋರ್ಸ್ ಹಣ ಇದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ 4 ತುಕಡಿಗಳು ಈಗಾಗಲೇ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ವಿಪತ್ತು ನಿರ್ವಹಣಾ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…