ರಾಜ್ಯ

ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಸಾಧ್ಯತೆ: ಸಚಿವ ಕೃಷ್ಣಬೈರೇಗೌಡ

ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯದ ಪ್ರತಿ  ಪಂಚಾಯತ್‌ ಮಟ್ಟದಲ್ಲೂ ಟಾಸ್ಕ್‌ಫೋರ್ಸ್‌ ರಚಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.

ಇಂದು(ಜು.2) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆ ಆದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು ಎಂದರು.

ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತದೆ. ಈಗಾಗಲೇ ಮಳೆಯಿಂದ 20 ಸಾವು ಸಂಬoಧಿಸಿದೆ. ಜಿಲ್ಲಾಧಿಕಾರಿಗಳು ಪ್ರತಿಯೊಂದು ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ. ಪಂಚಾಯತ್‌ ಮಟ್ಟದಲ್ಲಿ ರಚನೆಯಾಗುವ ಟಾಸ್ಕ್‌ಫೋರ್ಸ್‌ನಲ್ಲಿ, ಪಂಚಾಯತ್‌ ಇಲಾಖೆ ನೌಕರರು, ಕಂದಾಯ ಇಲಾಖೆ ನೌಕರರು, ಅಗ್ನಿಶಾಮಕ ವಿಭಾಗ, ಪೊಲೀಸ್‌ ಇಲಾಖೆ ಹಾಗೂ ಸಣ್ಣ ನೀರಾವರಿ ಅಧಿಕಾರಿಗಳು ಇರಲಿದ್ದಾರೆ ಎಂದು ತಿಳಿಸಿದರು.

ಕಾಳಜಿ ಕೇಂದ್ರಗಳ ರಚನೆಗೆ ಸೂಚನೆ
ಮಳೆಯಿಂದ ಕುಸಿಯಬಹುದಾದ ಮನೆಗಳನ್ನು ಗುರುತಿಸಿ ಅಂತಹ ಮನೆಗಳಲ್ಲಿ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರ್ ಅವರ ಪಿ.ಡಿ ಖಾತೆಯಲ್ಲಿ 776 ಕೋಟಿ ರೂ ಟಾಸ್ಕ್ ಫೋರ್ಸ್ ಹಣ ಇದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ 4 ತುಕಡಿಗಳು ಈಗಾಗಲೇ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ವಿಪತ್ತು ನಿರ್ವಹಣಾ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

4 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

6 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago