ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ.
ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ ಹಾಗೂ ಹಣ್ಣುಗಳ ಬೆಲೆ ಏರಿಕೆ ಮಾಡಲಾಗಿದೆ. ಹೀಗಾಗಿ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ.
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳು ಬರುತ್ತಿದ್ದು, ತರಕಾರಿ, ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ.
ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗಲಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ. ಸದ್ಯ ಮಳೆ ಇರುವ ಕಾರಣ ತರಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿಲ್ಲ. ಮಳೆ ನಿಂತರಷ್ಟೇ ಬೆಲೆಗಳು ಕೂಡ ಕಡಿಮೆಯಾಗುತ್ತದೆ. ಅಲ್ಲಿಯವರೆಗೂ ಬೆಲೆ ಇಳಿಕೆ ಸಾಧ್ಯತೆ ಕಡಿಮೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.
ಗ್ರಾಹಕರು ಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಣ್ಣು, ತರಕಾರಿ ಹಾಗೂ ಹೂವುಗಳನ್ನು ಜಾಸ್ತಿ ಖರೀದಿಸುವ ಬದಲು ಸ್ವಲ್ಪ ಸ್ವಲ್ಪ ಖರೀದಿ ಮಾಡುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…