ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ.
ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ ಹಾಗೂ ಹಣ್ಣುಗಳ ಬೆಲೆ ಏರಿಕೆ ಮಾಡಲಾಗಿದೆ. ಹೀಗಾಗಿ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ.
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳು ಬರುತ್ತಿದ್ದು, ತರಕಾರಿ, ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ.
ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗಲಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ. ಸದ್ಯ ಮಳೆ ಇರುವ ಕಾರಣ ತರಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿಲ್ಲ. ಮಳೆ ನಿಂತರಷ್ಟೇ ಬೆಲೆಗಳು ಕೂಡ ಕಡಿಮೆಯಾಗುತ್ತದೆ. ಅಲ್ಲಿಯವರೆಗೂ ಬೆಲೆ ಇಳಿಕೆ ಸಾಧ್ಯತೆ ಕಡಿಮೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.
ಗ್ರಾಹಕರು ಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಣ್ಣು, ತರಕಾರಿ ಹಾಗೂ ಹೂವುಗಳನ್ನು ಜಾಸ್ತಿ ಖರೀದಿಸುವ ಬದಲು ಸ್ವಲ್ಪ ಸ್ವಲ್ಪ ಖರೀದಿ ಮಾಡುತ್ತಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…