ರಾಜ್ಯ

ಅಬ್ಬಬ್ಬಾ ಇಲ್ಲಿ ಒಂದು ಪ್ಲೇಟ್‌ ಇಡ್ಲಿ ಬೆಲೆ ಬರೋಬ್ಬರಿ 500 ರೂಪಾಯಿ: ಯಾವ್ದು ಆ ಜಾಗ ಗೊತ್ತಾ.?

ಚೆನ್ನೈ: ಈ ಹೋಟೆಲ್‌ವೊಂದರಲ್ಲಿ ನೀವು ಇಡ್ಲಿ ತಿನ್ನಬೇಕಾದರೆ ಒಂದು ಇಡ್ಲಿಗ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30 ರಿಂದ 40 ರೂ ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಗೊತ್ತಾ.? ಇದು ಇರೋದಾದ್ರೂ ಎಲ್ಲಿ ಗೊತ್ತಾ.?

ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್‌ಗಳಲ್ಲಿ 30ರಿಂದ ಹಿಡಿದು ಹೆಚ್ಚೆಂದರೆ 50 ರೂಪಾಯಿಯ ಒಳಗಡೆ ಬಿಸಿಬಿಸಿಯಾದ ಇಡ್ಲಿಯನ್ನು ಸವಿಯಬಹುದು. ಆದರೆ ಚೆನ್ನೈನ ಹೋಟೆಲ್‌ ಒಂದರಲ್ಲಿ ಒಂದು ಪ್ಲೇಟ್‌ ಇಡ್ಲಿಗೆ ಬರೋಬ್ಬರಿ 500 ರೂಪಾಯಿಯನ್ನು ಪಾವತಿಸಬೇಕು.

ಈ ಇಡ್ಲಿ ಚೆನ್ನೈನ ಅಡ್ಯಾರ್‌ ಆನಂದ ಭವನ ಹೋಟೆಲ್‌ನಲ್ಲಿ ಲಭ್ಯವಿದೆ. ಈ ಇಡ್ಲಿ ದುಬಾರಿಯಾಗಲು ಕಾರಣ ಅದರ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳು. ಬಾದಾಮಿ, ಬೆರಿ ಹಣ್ಣುಗಳು, ಆಲಿವ್ ಎಣ್ಣೆ ಮತ್ತು ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತದೆ. ಲವಂಗ, ದಾಲ್ಚಿನ್ನಿ, ಮಶ್ರೂಮ್‌, ಬ್ರೆಜಿಲ್‌ ನಟ್‌, ಒಮೆಗಾ 3, ಅಗಸೇಬೀಜ, ಶುಂಠಿಪುಡಿ, ಅಶ್ವಗಂಧ, 24 ಗಂಟೆಗಳ ಕಾಲ ನೆನೆಸಿದ ಬಾದಾಮಿ, ವಾಲ್ನಟ್‌ ಪಿಸ್ತಾ, ಗೋಡಂಬಿ, ನೀಲಿ ಹಣ್ಣುಗಳು, ಕೇಸರಿ ಸೇರಿದಂತೆ ಇತ್ಯಾದಿ ಪೋಷಕಾಂಶಗಳಿಂದ ಕೂಡಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ.

ಮಧುಮೇಹಿಗಳು ಕೂಡ ಈ ಇಡ್ಲಿಯನ್ನು ಹಿಂಜರಿಕೆಯಿಲ್ಲದೇ ಸವಿಯಬಹುದು. ಇಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲದಲ್ಲಿಡಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಬಳಸುವ ಆಲಿವ್‌ ಎಣ್ಣೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಉಪಯುಕ್ತವಾಗಿದೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಬ್ಲೂಬೆರಿಗಳನ್ನು ಸಹ ಇದರಲ್ಲಿ ಬಳಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

6 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

29 mins ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

59 mins ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago

ಓದುಗರ ಪತ್ರ: ಗಾಳಿ… ತಂಗಾಳಿ !

ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…

2 hours ago