ಚೆನ್ನೈ: ಈ ಹೋಟೆಲ್ವೊಂದರಲ್ಲಿ ನೀವು ಇಡ್ಲಿ ತಿನ್ನಬೇಕಾದರೆ ಒಂದು ಇಡ್ಲಿಗ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30 ರಿಂದ 40 ರೂ ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಗೊತ್ತಾ.? ಇದು ಇರೋದಾದ್ರೂ ಎಲ್ಲಿ ಗೊತ್ತಾ.?
ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್ಗಳಲ್ಲಿ 30ರಿಂದ ಹಿಡಿದು ಹೆಚ್ಚೆಂದರೆ 50 ರೂಪಾಯಿಯ ಒಳಗಡೆ ಬಿಸಿಬಿಸಿಯಾದ ಇಡ್ಲಿಯನ್ನು ಸವಿಯಬಹುದು. ಆದರೆ ಚೆನ್ನೈನ ಹೋಟೆಲ್ ಒಂದರಲ್ಲಿ ಒಂದು ಪ್ಲೇಟ್ ಇಡ್ಲಿಗೆ ಬರೋಬ್ಬರಿ 500 ರೂಪಾಯಿಯನ್ನು ಪಾವತಿಸಬೇಕು.
ಈ ಇಡ್ಲಿ ಚೆನ್ನೈನ ಅಡ್ಯಾರ್ ಆನಂದ ಭವನ ಹೋಟೆಲ್ನಲ್ಲಿ ಲಭ್ಯವಿದೆ. ಈ ಇಡ್ಲಿ ದುಬಾರಿಯಾಗಲು ಕಾರಣ ಅದರ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳು. ಬಾದಾಮಿ, ಬೆರಿ ಹಣ್ಣುಗಳು, ಆಲಿವ್ ಎಣ್ಣೆ ಮತ್ತು ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತದೆ. ಲವಂಗ, ದಾಲ್ಚಿನ್ನಿ, ಮಶ್ರೂಮ್, ಬ್ರೆಜಿಲ್ ನಟ್, ಒಮೆಗಾ 3, ಅಗಸೇಬೀಜ, ಶುಂಠಿಪುಡಿ, ಅಶ್ವಗಂಧ, 24 ಗಂಟೆಗಳ ಕಾಲ ನೆನೆಸಿದ ಬಾದಾಮಿ, ವಾಲ್ನಟ್ ಪಿಸ್ತಾ, ಗೋಡಂಬಿ, ನೀಲಿ ಹಣ್ಣುಗಳು, ಕೇಸರಿ ಸೇರಿದಂತೆ ಇತ್ಯಾದಿ ಪೋಷಕಾಂಶಗಳಿಂದ ಕೂಡಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ.
ಮಧುಮೇಹಿಗಳು ಕೂಡ ಈ ಇಡ್ಲಿಯನ್ನು ಹಿಂಜರಿಕೆಯಿಲ್ಲದೇ ಸವಿಯಬಹುದು. ಇಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲದಲ್ಲಿಡಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಬಳಸುವ ಆಲಿವ್ ಎಣ್ಣೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಉಪಯುಕ್ತವಾಗಿದೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಬ್ಲೂಬೆರಿಗಳನ್ನು ಸಹ ಇದರಲ್ಲಿ ಬಳಸಲಾಗುತ್ತದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…