ರಾಜ್ಯ

ಅಬ್ಬಬ್ಬಾ ಇಲ್ಲಿ ಒಂದು ಪ್ಲೇಟ್‌ ಇಡ್ಲಿ ಬೆಲೆ ಬರೋಬ್ಬರಿ 500 ರೂಪಾಯಿ: ಯಾವ್ದು ಆ ಜಾಗ ಗೊತ್ತಾ.?

ಚೆನ್ನೈ: ಈ ಹೋಟೆಲ್‌ವೊಂದರಲ್ಲಿ ನೀವು ಇಡ್ಲಿ ತಿನ್ನಬೇಕಾದರೆ ಒಂದು ಇಡ್ಲಿಗ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30 ರಿಂದ 40 ರೂ ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಗೊತ್ತಾ.? ಇದು ಇರೋದಾದ್ರೂ ಎಲ್ಲಿ ಗೊತ್ತಾ.?

ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್‌ಗಳಲ್ಲಿ 30ರಿಂದ ಹಿಡಿದು ಹೆಚ್ಚೆಂದರೆ 50 ರೂಪಾಯಿಯ ಒಳಗಡೆ ಬಿಸಿಬಿಸಿಯಾದ ಇಡ್ಲಿಯನ್ನು ಸವಿಯಬಹುದು. ಆದರೆ ಚೆನ್ನೈನ ಹೋಟೆಲ್‌ ಒಂದರಲ್ಲಿ ಒಂದು ಪ್ಲೇಟ್‌ ಇಡ್ಲಿಗೆ ಬರೋಬ್ಬರಿ 500 ರೂಪಾಯಿಯನ್ನು ಪಾವತಿಸಬೇಕು.

ಈ ಇಡ್ಲಿ ಚೆನ್ನೈನ ಅಡ್ಯಾರ್‌ ಆನಂದ ಭವನ ಹೋಟೆಲ್‌ನಲ್ಲಿ ಲಭ್ಯವಿದೆ. ಈ ಇಡ್ಲಿ ದುಬಾರಿಯಾಗಲು ಕಾರಣ ಅದರ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳು. ಬಾದಾಮಿ, ಬೆರಿ ಹಣ್ಣುಗಳು, ಆಲಿವ್ ಎಣ್ಣೆ ಮತ್ತು ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತದೆ. ಲವಂಗ, ದಾಲ್ಚಿನ್ನಿ, ಮಶ್ರೂಮ್‌, ಬ್ರೆಜಿಲ್‌ ನಟ್‌, ಒಮೆಗಾ 3, ಅಗಸೇಬೀಜ, ಶುಂಠಿಪುಡಿ, ಅಶ್ವಗಂಧ, 24 ಗಂಟೆಗಳ ಕಾಲ ನೆನೆಸಿದ ಬಾದಾಮಿ, ವಾಲ್ನಟ್‌ ಪಿಸ್ತಾ, ಗೋಡಂಬಿ, ನೀಲಿ ಹಣ್ಣುಗಳು, ಕೇಸರಿ ಸೇರಿದಂತೆ ಇತ್ಯಾದಿ ಪೋಷಕಾಂಶಗಳಿಂದ ಕೂಡಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ.

ಮಧುಮೇಹಿಗಳು ಕೂಡ ಈ ಇಡ್ಲಿಯನ್ನು ಹಿಂಜರಿಕೆಯಿಲ್ಲದೇ ಸವಿಯಬಹುದು. ಇಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲದಲ್ಲಿಡಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಬಳಸುವ ಆಲಿವ್‌ ಎಣ್ಣೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಉಪಯುಕ್ತವಾಗಿದೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಬ್ಲೂಬೆರಿಗಳನ್ನು ಸಹ ಇದರಲ್ಲಿ ಬಳಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago