ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ.
ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್ ವೇವ್ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಈ ಭಾಗದಲ್ಲಿ ಏಕಾಏಕಿ 5 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆಗೆ ಕೊಟ್ಟಿದೆ.
ಇನ್ನು ವಾಡಿಕೆಗಿಂತ ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳ ವೇಳೆಗೆ ಜನರು ಈ ಪ್ರಮಾಣದ ಬಿಸಿಲಿನ ಅಬ್ಬರವನ್ನು ಎದುರಿಸುತ್ತಿದ್ದರು. ಆದರೆ ಈ ಬಾರಿ ಫೆಬ್ರವರಿಯಲ್ಲೇ ಸೂರ್ಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಈ ಬಾರಿ ವಾಡಿಕೆಗಿಂತ ಬಿಸಿಲಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದು, ಎಳನೀರಿಗಂತೂ ಭಾರೀ ಡಿಮ್ಯಾಂಡ್ ಆಗಿದೆ.
ಒಂದು ಎಳನೀರಿನ ಬೆಲೆ 60 ರಿಂದ 70 ರೂ ಏರಿಕೆಯಾಗಿದ್ದು, ತಂಪು ಪಾನೀಯಗಳ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…