ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ.
ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಸಹಸ್ರಾರು ಪ್ರವಾಸಿಗರು ಈಗಾಗಲೇ ಜಮಾಯಿಸಿದ್ದಾರೆ.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ನ್ಯೂ ಇಯರ್ ಸೆಬಬ್ರೇಷನ್ಗೆ ಇಂದು ಮತ್ತು ನಾಳೆ ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆಯಿದೆ.
ಇನ್ನು ಹಂಪಿಗೆ ಭೇಟಿ ನೀಡುವ ಪ್ರವಾಸಿಗರು ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪ್ರಮುಖ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆ ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…